ಹರಿಯಾಣ ಮಾಜಿ ಸಚಿವ, ಬಿಎಸ್ ಪಿ ಮುಖಂಡ ಕರ್ತಾರ್ ಸಿಂಗ್ ಬಿಜೆಪಿ ಸೇರ್ಪಡೆ

ಹರಿಯಾಣದ ಮಾಜಿ ಸಚಿವ ಹಾಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖಂಡ ಕರ್ತಾರ್ ಸಿಂಗ್ ಭದನ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕರ್ತಾರ್ ಸಿಂಗ್
ಕರ್ತಾರ್ ಸಿಂಗ್

ನವದೆಹಲಿ: ಹರಿಯಾಣದ ಮಾಜಿ ಸಚಿವ ಹಾಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖಂಡ ಕರ್ತಾರ್ ಸಿಂಗ್ ಭದನ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇಸರಿ ಪಕ್ಷದ ಸದಸ್ಯತ್ವ ಪಡೆದ ಬಳಿಕ ಸುದ್ದಿಗಾರರೊಂದಿಗೆ ಕರ್ತಾರ್ ಸಿಂಗ್ ಅವರು, ನಾನು ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳಿಂದ ಪ್ರೇರಿತನಾಗಿ ಬಿಜೆಪಿ ಸೇರಿದ್ದೇನೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಮೋದಿ ಸರ್ಕಾರವನ್ನು ನಾನು ಬೆಂಬಲಿಸುತ್ತೇನೆ. ಬಿಜೆಪಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com