ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿ ಬಂಧನ

ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಕಮಲೇಶ್ ತಿವಾರಿ
ಕಮಲೇಶ್ ತಿವಾರಿ

ನಾಗ್ಪುರ: ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. 

ಉತ್ತರಪ್ರದೇಶ ಪೊಲೀಸರು ನೀಡಿದ್ದ ಮಾಹಿತಿ ಮೇರೆಗೆ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಬಂಧಿತ ವ್ಯಕ್ತಿಯ ಹೆಸರನ್ನು ಹಾಗೂ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. 

ಹಿಂದೂ ಸಮಾಜ ಪಕ್ಷದ ನಾಯಕರಾಗಿದ್ದ ತಿವಾರಿಯವರನ್ನು ಕೆಲ ದಿನಗಳ ಹಿಂದಷ್ಟೇ ಲಖನೌನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಈವರೆಗೂ ಐವರನ್ನು ಬಂಧನಕ್ಕೊಳಪಡಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com