ಪುದುಚೇರಿ: ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್ ವಾರ್ ನಡೆದಿದೆ.
ಸಿಎಂ ನಾರಾಯಣಸ್ವಾಮಿ ಅವರು ಚುನಾವಣಾ ಪ್ರಚಾರದ ಬೈಕ್ ರ್ಯಾಲಿ ವೇಳೆ ಹೆಲ್ಮೆಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್ ಬೇಡಿ ಅವರು ಆರೋಪಿಸಿದರೆ, ಇನ್ನೊಬ್ಬರಿಗೆ ಬೋಧನೆ ಮಾಡುವ ಬದಲು ಅದನ್ನು ಅಳವಡಿಸಿಕೊಳ್ಳಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
ಸಂಚಾರಿ ನಿಯಮ ಉಲ್ಲಂಘಿಸಿದ ಸಿಎಂ ನಾರಾಯಣಸ್ವಾಮಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಿರಣ್ ಬೇಡಿಯವರು ಪುದುಚೇರಿಯ ಪೊಲೀಸ್ ಮಹಾ ನಿರ್ದೇಶಕರಾದ ಬಾಲಾಜಿ ಶ್ರೀವಾಸ್ತವ ಅವರಿಗೆ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಮದ್ರಾಸ್ ಹೈಕೋರ್ಟ್ ಕಾಯಿದೆ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರೂ ಸಿಎಂ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.
Advertisement