ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಕುಪ್ವಾರಾದ ತಂಗ್ಧಾರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಭಾನುವಾರ ಮುಂಜಾನೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಭಾರತೀಯ ಯೋದರು ಹುತಾತ್ಮರಾಗಿದ್ದಾರೆ.
ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಪಾಕ್ ಸೇನೆ, ಭಾರತದ ಗಡಿಯೊಳಗೆ ಭಾರಿ ಗುಂಡಿನ ದಾಳಿ ಆರಂಭಿಸಿದ್ದು ಇಂದು ಮುಂಜಾನೆ 4 ಗಂಟೆಯವರೆಗೂ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಉದ್ಧಟತನಕ್ಕೆ ಭಾರತೀಯ ಸೇನೆ ಕೂಡ ತಿರುಗೇಟು ನೀಡಿದ್ದು, ಗುಂಡಿನದಾಳಿಯನ್ನು ತೀವ್ರಗೊಳಿಸಿದೆ.
ಇನ್ನು ಅಕ್ಟೋಬರ್ 13 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿನ ಗಡಿ ನಿಯಂತ್ರಣದ ಬಳಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ ಯೋಧನೊಬ್ಬ ಹುತಾತ್ಮನಾಗಿದ್ದನು.
Advertisement