ದೆಹಲಿ: ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಎಚ್ ಡಿಕೆ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ , ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. 
ಕುಮಾರಸ್ವಾಮಿ
ಕುಮಾರಸ್ವಾಮಿ

ನವದೆಹಲಿ:  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ , ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. 

ಕುಮಾರಸ್ವಾಮಿಗೆ ಸಂಸದ ಡಿಕೆ ಸುರೇಶ್,  ಮಾಜಿ ಸಚಿವ  ಪುಟ್ಟರಾಜು, ಸಾ. ರಾ. ಮಹೇಶ್ ಸಾಥ್ ನೀಡಿದ್ದಾರೆ. ಡಿಕೆಶಿವಕುಮಾರ್ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ವಿಚಾರಗಳು, ವೈಯಕ್ತಿಕ ವಿಚಾರಗಳು ಬೇರೆ ಬೇರೆಯಾಗಿರುತ್ತವೆ. ಇದು ನನ್ನ ವೈಯಕ್ತಿಕ ಭೇಟೆಯಾಗಿದೆ ಎಂದರು.

ಡಿಕೆ ಶಿವಕುಮಾರ್ ರಾಜಕೀಯ ಪ್ರತಿಕಾರದಿಂದ ಶಿಕ್ಷೆ ಎದುರಿಸುತ್ತಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದೇನೆ. ಅವರು ಮಾನಸಿಕವಾಗಿ ಸದೃಢರಾಗಿದ್ದು,  ಎಲ್ಲಾವನ್ನು ಮೆಟ್ಟು ನಿಂತು ಹೊರಗೆ ಬರಲಿದ್ದಾರೆ ಎಂಬ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com