ಹರ್ಯಾಣ ಬಿಜೆಪಿ ಮೊದಲ ವಿಕೆಟ್ ಪತನ: ಸುಭಾಷ್ ಬರಾಲಾ ರಾಜೀನಾಮೆ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ನೈತಿಕ ಹೊಣೆಹೊತ್ತು ರಾಜೀನಾಮೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಬರಾಲಾ ರಾಜೀನಾಮೆ ನೀಡಿದ್ದಾರೆ.
ಸುಭಾಷ್ ಬರಾಲಾ
ಸುಭಾಷ್ ಬರಾಲಾ

ಚಂಡೀಗಡ: ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ನೈತಿಕ ಹೊಣೆಹೊತ್ತು ರಾಜೀನಾಮೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಬರಾಲಾ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಪಕ್ಷದ ಹಿನ್ನಡೆಯೊಂದಿಗೆ ಸ್ವತಃ ಸುಭಾಷ್ ಸ್ಪರ್ಧೆ ಮಾಡಿರುವ ತೋಹಾನಾ ಕ್ಷೇತ್ರದಲ್ಲಿ ಅವರು ಭಾರೀ ಹಿನ್ನಡೆ ಅನುಭವಿದ್ದಾರೆ. ಈ ಕಾರಣಕ್ಕೆ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕಳೆದ 5 ವರ್ಷದಿಂದ ಅಧಿಕಾರದಲ್ಲಿದ್ದ ಐವರು ಬಿಜೆಪಿ ಸಚಿವರು ಕೂಡ ಹಿನ್ನಡೆ ಅನುಭವಿಸಿದ್ದು, ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ.

ಅಧಿಕಾರದಲ್ಲಿ ಇದ್ದರೂ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದು ಬಿಜೆಪಿಗೆ ಭಾರೀ ಹೊಡೆತ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com