ನವದೆಹಲಿ: ಐಎನ್ಎಕ್ಸ್ ಮೀಡಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ತಿಳಿದುಕೊಳ್ಳಲು ಹಾತೊರೆಯುತ್ತಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.
ನ್ಯಾಯಾಲಯ ವಿಚಾರಣೆ ಮಗಿಯುತ್ತಿದ್ದಂತೆಯೇ ತಮ್ಮ ವಕೀಲರಿಗೆ ಕರೆ ಮಾಡಿದ ಚಿದಂಬರಂ ಅವರು ಚುನಾವಣಾ ಫಲಿತಾಂಶದ ಕುರಿತು ಮಾಹಿತಿ ಕೇಳಿದ್ದಾರೆ.
ಈ ವೇಳೆ ಪ್ರತಿಕ್ರಿಯೆ ನೀಡಿರುವ ವಕೀಲರು, ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಉತ್ತಮ ಫಲಿತಾಂಶದೊಂದೆ ಮುನ್ನಡೆ ಸಾಧಿಸುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ನಗುತ್ತಲೇ ಫೋನ್ ನೋಡುತ್ತಿದ್ದ ಚಿದಂಬರಂ ಅವರು ಮತ್ತಷ್ಟು ಮಾಹಿತಿ ಪಡೆದುಕೊಳ್ಳಲು ಮುಂದಾಗಿದ್ದರೆಂದು ತಿಳಿದುಬಂದಿದೆ.
ಅಕ್ಟೋಬರ್ 21 ರಂದು ಎರಡೂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ನಿನ್ನೆಯಷ್ಟೇ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ಬಾರಿ ಕಾಂಗ್ರೆಸ್ ನಲ್ಲಿ ಬೆಳವಣಿಗೆಗಳು ಕಂಡು ಬಂದಿದೆ.
Advertisement