ಶಿವಸೇನೆ 50:50 ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ: 'ಸೇನೆ' ಪರ ಪವಾರ್ ಬ್ಯಾಟಿಂಗ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಿಲ್ಲದ ಕಾರಣ ಶಿವಸೇನೆ ಹೆಚ್ಚಿನ ಸ್ಥಾನ ಪಡೆದಿದ್ದು, ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ 50-50ರ ಫಾರ್ಮುಲಾ ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಮುಂಬಯಿ:  ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಿಲ್ಲದ ಕಾರಣ ಶಿವಸೇನೆ ಹೆಚ್ಚಿನ ಸ್ಥಾನ ಪಡೆದಿದ್ದು, ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ 50-50ರ ಫಾರ್ಮುಲಾ ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1990 ರಲ್ಲೂ ಕೂಡ ಬಿಜೆಪಿ ಮತ್ತು ಶಿವಸೇನೆ 50:50 ಫಾರ್ಮುಲಾದಂತೆ ಸರ್ಕಾರ ರಚಿಸಿದ್ದವು.,ಶಿವಸೇನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮುಂದೆ ಈ ಬೇಡಿಕೆ ಇಟ್ಟಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದ್ದಾರೆ, 

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಾಂಗ್ರೆಸ್-ಎನ್ ಸಿ ಪಿ ಮೈತ್ರಿಕೂಡ 102 ಸೀಟು ಪಡೆದಿದೆ, ಬಿಜೆಪಿ-ಶಿವಸೇನೆ ಮೈತ್ರಿಕೂಟ 220 ಸೀಟು ಗೆಲ್ಲುವ ಗುರಿ ಹೊಂದಿತ್ತು. 

ಕಾಂಗ್ರೆಸ್ ಸ್ಥಳೀಯ ನಾಯಕರು ನಮ್ಮೊಂದಿಗೆ ಕೆಲಸ ಮಾಡಿದ್ದಾರೆ, ಸೋನಿಯಾ ಗಾಂಧಿ ಅವರ ಅನಾರೋಗ್ಯ ಕಾರಣದಿಂದಾಗಿ ಅವರು ಪ್ರಚಾರ ಕಾರ್ಯಕ್ಕೆ ಬರಲಾಗಲಿಲ್ಲ,ಆದರೆ ರಾಹುಲ್ ಗಾಂಧಿ ಬಂದಿದ್ದರು ಎಂದು ಪವಾರ್ ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com