ನವದೆಹಲಿ: ದೇಶದಾದ್ಯಂತ ಬೆಳಕಿನಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ಮೋದಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.
ದೀಪಾವಳಿ ಎಂದು ಕರೆಯಲ್ಪಡುವ ದೀಪಾವಳಿ ಭಾರತದ ಅತ್ಯಂತ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ. ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಪ್ರೀತಿ, ಕಾಳಜಿ ಹಾಗೂ ಹಂಚಿಕೆಯ ದೀಪವನ್ನು ಬೆಳಗಿಸುವ ಮೂಲಕ ನಿರ್ಗತಿಕರ ಜೀವನದಲ್ಲಿ ಸಂತೋಷವನ್ನು ತರೋಣ ಎಂದು ಹೇಳಿದ್ದಾರೆ.
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದು, ದೀಪಾವಳಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ದೀಪಗಳ ಈ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತರಲಿ ಮತ್ತು ನಮ್ಮ ದೇಶ ಸದಾಕಾಲ ಸಂತೋಷ, ಸಮೃದ್ಧಿ ಹಾಗೂ ಅದೃಷ್ಟದಿಂದ ಬೆಳಗಲಿ ಎಂದು ತಿಳಿಸಿದ್ದಾರೆ.
Advertisement