ಕಾಶ್ಮೀರ: ಸೋಪೋರೆಯಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, 20 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಸೋಪೋರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಉಗ್ರರು ಸೋಮವಾರ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಉಗ್ರರು ಸೋಮವಾರ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ 20 ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿವೆ.

ಎರಡು ದಿನಗಳ ಹಿಂದಷ್ಟೇ ಶ್ರೀನಗರದ ಕಾರನ್ನಗರ್ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಆರು ಮಂದಿ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು.

ಪೊಲೀಸರ ಮಾಹಿತಿ ಪ್ರಕಾರ, ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ಪ್ರದೇಶಕ್ಕೆ ಯುರೋಪಿಯನ್ ಸಂಸದೀಯ ನಿಯೋಗ ಭೇಟಿ ನೀಡುವ ಮುನ್ನಾ ದಿನವೇ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ವರದಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com