ಬಿಜೆಪಿ ಷಡ್ಯಂತ್ರದಿಂದ ಬಂಧನ: ಡಿಕೆ ಶಿವಕುಮಾರ್ ಆಕ್ರೋಶ

ಬಿಜೆಪಿಯ ಷಡ್ಯಂತ್ರ್ಯದಿಂದ  ತಮ್ಮ ಬಂಧನವಾಗಿರುವುದಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ನವದೆಹಲಿ: ಬಿಜೆಪಿಯ ಷಡ್ಯಂತ್ರ್ಯದಿಂದ  ತಮ್ಮ ಬಂಧನವಾಗಿರುವುದಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಇಡಿ ಬಂಧನದ ನಂತರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಸಂಚಿನಿಂದ ರಾಜಕೀಯ ಪ್ರೇರಿತದಿಂದ ತಮ್ಮ ಬಂಧಿಸಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಟ್ವೀಟ್ ಮಾಡಿದ ಡಿಕೆ ಶಿವಕುಮಾರ್, ಬಿಜೆಪಿಯ ಕುತಂತ್ರ, ಮತ್ತು ಪ್ರತಿಕಾರಕ್ಕೆ ಬಲಿಯಾಗಿದ್ದೇನೆ ತಮ್ಮನ್ನು ಆರೆಸ್ಟ್ ಮಾಡಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಸ್ನೇಹಿತರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com