ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪಿ.ಚಿದಂಬರಂ
ಪಿ.ಚಿದಂಬರಂ

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ದೆಹಲಿಯ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿ ಇಡಲಾಗುತ್ತಿದೆ.

ಪ್ರಕರಣ ಸಂಬಂಧ ಎರಡು ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು ತಿಹಾರ್ ಜೈಲಿನಲ್ಲಿ ವಿಶೇಷ ಕೊಠಡಿಯಲ್ಲಿಡಲು ಸೂಚಿಸಿದೆ.

ಐಎನ್ಎಕ್ಸ್ ಪ್ರಕರಣ ಸಂಬಂಧ ಚಿದಂಬರಂ ಅವರನ್ನು ಆಗಸ್ಟ್ 21ರ ಮಧ್ಯರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com