ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಉದ್ಧಟತನ: ಭಾರತೀಯ ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಭಾನುವಾರ ವರದಿಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಪಾಕಿಸ್ತಾನ ಸೇನೆ ತನ್ನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಭಾನುವಾರ ವರದಿಗಳು ತಿಳಿಸಿವೆ. 

ಜಮ್ಮು ಕಾಶ್ಮೀರದ ನೌಶೆರಾ, ರಜೌರಿ ಜಿಲ್ಲೆಯ ಸುಂದರ್ ಬನಿ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. 

ಇಂದು ಬೆಳಿಗ್ಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸ್ಥಳದಲ್ಲಿ ಪಾಕಿಸ್ತಾನ ಹಾಗೂ ಭಾರತೀಯ ಸೇನೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com