ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್, ಇಬ್ಬರು ನಕ್ಸಲರು ಹತ

ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದಂತೇವಾಡ: ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ ಘಡದ ದಾಂತೇವಾಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿನ್ನೆ ತಡರಾತ್ರಿಯಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳ ಗುಂಡೇಟಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ. ಮೂಲಗಳ ಪ್ರಕಾರ ಇಲ್ಲಿನ ಕುಟ್ರೆಮ್ ಗ್ರಾಮದ ಕಿರಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ವೇಳೆ ಯೋಧರ ಆಗಮನವಾಗುತ್ತಲೇ ತಪ್ಪಿಸಿಕೊಳ್ಳುವ ಭರದಲ್ಲಿ ನಕ್ಸಲರು ಗುಂಡು ಹಾರಿಸಿದ್ದಾರೆ. 

ಭದ್ರತಾ ಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿದಲ್ಲಿ ನಕ್ಸರು ತಂದಿದ್ದ 2 ರೈಫಲ್ ಗಳು, 9ಎಂಎಂ ಪಿಸ್ತೋಲ್, 12 ಬೋರ್ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಹಲವು ನಕ್ಸಲರು ಪರಾರಿಯಾಗಿದ್ದು, ಅವರ ಶೋಧಕ್ಕೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ದಾಂತೇವಾಡ ಎಸ್ ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com