ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿಯೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ, ಮಮತಾ ಬ್ಯಾನರ್ಜಿ ಬಾಂಗ್ಲಾದೇಶಿಗರನ್ನು ರಕ್ಷಿಸಿ, ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಬೇಕೆಂದಿದ್ದರೆ ಅವರು ಬಾಂಗ್ಲಾದೇಶದ ಪ್ರಧಾನಿಯಾಗಲಿ ಎಂದು ಸುರೇಂದ್ರ ಸಿಂಗ್ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಆಕೆಯ ಭಾಷೆಯನ್ನು ಬದಲಾವಣೆ ಮಾಡಿಕೊಳ್ಳಬೇಕು. ಬಾಂಗ್ಲಾದೇಶದವರ ಬೆಂಬಲದೊಂದಿಗೆ ಅವರು ರಾಜಕಾರಣ ಮಾಡಬೇಕೆಂದಿದ್ದರೆ ಅವರು ಬಾಂಗ್ಲಾದೇಶಕ್ಕೇ ಹೋಗಬೇಕು. ಅವರಿಗೆ ಧೈರ್ಯ ಇದ್ದರೆ ಬಾಂಗ್ಲಾದೇಶದ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ. ಅಸ್ಸಾಂ ನಲ್ಲಿ ಎನ್ ಆರ್ ಸಿ ಜಾರಿಗೆ ತಂದಿರುವುದರ ವಿರುದ್ಧ ತೃಣಮೂಲ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು.
Advertisement