ಸಮಾನ ಸೀಟು ಹಂಚಿಕೆಯಾಗದಿದ್ದರೆ ಮೈತ್ರಿ ಮುರಿಯುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೇಳೆ ಸಮಾನ ಸೀಟು ಹಂಚಿಕೆಯಾಗದಿದ್ದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬರುತ್ತೇವೆಂದು ಶಿವಸೇನೆ ಗುರುವಾರ ಬಿಜೆಪಿಗೆ ಎಚ್ಚರಿಕೆ ನೀಡಿದೆ. 
ಸಂಜಯ್ ರಾವತ್
ಸಂಜಯ್ ರಾವತ್

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೇಳೆ ಸಮಾನ ಸೀಟು ಹಂಚಿಕೆಯಾಗದಿದ್ದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಹೊರಬರುತ್ತೇವೆಂದು ಶಿವಸೇನೆ ಗುರುವಾರ ಬಿಜೆಪಿಗೆ ಎಚ್ಚರಿಕೆ ನೀಡಿದೆ. 

ಈ ಕುರಿತಂತೆ ಹೇಳಿಕೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ವಿಧಾನಸಭಾ ಚುನಾವಣೆ ವೇಳೆ ಶಿವಸೇನೆಗೆ ಸಮಾನ ಸೀಟು ನೀಡದಿದ್ದಲ್ಲಿ ಮೈತ್ರಿ ಮುರಿಯುತ್ತೇವೆಂದು ಹೇಳಿದ್ದಾರೆ. 

ಅಮಿತ್ ಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ತೆಗೆದುಕೊಂಡ 50-50 ಸೂತ್ರವನ್ನು ಗೌರವಿಸಬೇಕು. ಪ್ರಸ್ತುತ ನಾನು ಮೈತ್ರಿ ಮುರಿಯುವ ಬಗ್ಗೆ ಮಾತನಾಡುತ್ತಿಲ್ಲ. ದಿವಾಕರ್ ರಾಟೆ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ. 

ಈ ಹಿಂದೆ ಹೇಳಿಕೆ ನೀಡಿದ್ದ ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರ ಸರ್ಕಾರದ ಸಚಿವ ದಿವಾಕರ್ ರಾಟೆಯವರು, ಶಿವಸೇನೆಗೆ ಸಮಾನ ಸೀಟು ನೀಡದಿದ್ದಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಜೊತೆಗಿನ ಮೈತ್ರಿ ಮುರಿದು ಬೀಳುತ್ತದೆ ಎಂದಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com