ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ

ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಜಿತ್ ಪವಾರ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್ ಹರಿಭಾವು ಬಗಡೆ ಅವರು ಖಚಿತಪಡಿಸಿದ್ದಾರೆ.

ಅಜಿತ್ ಪವಾರ್ ಅವರು ನನಗೆ ಕರೆ ಮಾಡಿದ್ದರು ಮತ್ತು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಬಳಿಕ ನನಗೆ ರಾಜೀನಾಮೆ ಪತ್ರ ನೀಡಿದ್ದು, ಅದನ್ನು ನಾನು ಅಂಗೀಕರಿಸಿದ್ದೇನೆ. ಆದರೆ ರಾಜೀನಾಮೆಗೆ ಅವರು ಯಾವುದೇ ಕಾರಣ ನೀಡಿಲ್ಲ ಎಂದು ಬಗಡೆ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್(ಎಂಎಸ್ಎ ಬ್ಯಾಂಕ್) ನಿರ್ದೇಶಕರಾಗಿದ್ದಾಗ 25 ಸಾವಿರ ಕೋಟಿ ರೂಪಾಯಿ ಹಗರಣ ನಡೆದಿತ್ತು. ಈ ಹಗರಣದಲ್ಲಿ ಅವರ ಅಂಕಲ್ ಶರದ್ ಪವಾರ್ ಅವರ ಹೆಸರೂ ಸಹ ಕೇಳಿಬಂದಿತ್ತು. ಈಗ ಅಜಿತ್ ಪವಾರ್ ಅವರ ದಿಢೀರ್ ರಾಜೀನಾಮೆ ನಿರ್ಧಾರಕ್ಕೆ ಈ ಹಗರಣ ಕಾರಣ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com