ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ! 

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ!
ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಭಾಷಣವನ್ನು ಬೀದಿ ಬದಿಯ ಭಾಷಣ ಎಂದ ಸುಬ್ರಹ್ಮಣಿಯನ್ ಸ್ವಾಮಿ!

ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಭಾರತದ ವಿರುದ್ಧ ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್ ಭಾಷಣವನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
 
ನವದೆಹಲಿಯಲ್ಲಿ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಇಮ್ರಾನ್ ಖಾನ್ ಬೀದಿ ಬದಿಯ ಜನರನ್ನುದ್ದೇಶಿಸಿ ಮಾತನಾಡುವಂತೆ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದರು.  ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿರುವವರು ಮಾತ್ರ ಚಪ್ಪಾಳೆ ತಟ್ಟುತ್ತಿದ್ದರು. ವಿಶ್ವಸಂಸ್ಥೆಯಲ್ಲಿ ಬೇರೊಂದು ದೇಶದ ಆಂತರಿಕ ರಾಜಕೀಯದ ಬಗ್ಗೆ ಮಾತನಾಡುವಂತಿಲ್ಲ. ಆದರೆ ಅಂತಾರಾಷ್ಟ್ರೀಯ ವಿಷಯಗಳನ್ನಷ್ಟೇ ಮಾತನಾಡಬೇಕು ಎಂದು ಸ್ವಾಮಿ ಹೇಳಿದ್ದಾರೆ. 

ಪಾಕಿಸ್ತಾನದಲ್ಲಿರುವ ಕೆಲವು ಅವಿದ್ಯಾವಂತರಿಗೆ ಇಮ್ರಾನ್ ಖಾನ್ ಹೇಳಿಕೆಯಿಂದ ಸಂತಸವಾಗಬಹುದೆಂದು ಸುಬ್ರಹ್ಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com