ತೆಲಂಗಾಣದಲ್ಲಿ ಮತ್ತೆ ಮೂವರ ಸಾವು, 30 ಹೊಸ ಪ್ರಕರಣ: ಆತಂಕದಲ್ಲಿ ಜನ

ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದರಾಬಾದ್ : ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 

ಕೋವಿಡ್‌–19 ದೃಢಪಟ್ಟ ಮೂವತ್ತು ಹೊಸ ಪ್ರಕರಣಗಳು ತೆಲಂಗಾಣದಲ್ಲಿ ವರದಿಯಾಗಿರುವುದಾಗಿ ಗುರುವಾರ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಕಚೇರಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಸೋಂಕಿನಿಂದಾಗಿ ಈ ಹಿಂದೆ ರಾಜ್ಯದಲ್ಲಿ ಮೃತಪಟ್ಟಿರುವ ಆರು ಮಂದಿ ಸಹ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗಿವಹಿಸಿದ್ದರು. ಬುಧವಾರ ಮೂವರು ಸಾವಿಗೀಡಾಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ ಎಲ್ಲ 30 ಮಂದಿಯೂ ದೆಹಲಿಯ ನಿಜಾಮುದ್ದೀನ್‌ಗೆ ಭೇಟಿ ನೀಡಿದ ಹಿನ್ನೆಲೆ ಹೊಂದಿದ್ದಾರೆ. 

ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ತಿಂಗಳು ನಿಜಾಮುದ್ದೀನ್‌ನಲ್ಲಿ ನಡೆದ ಸಭೆಯಲ್ಲಿ ಸುಮಾರು 8,500 ಮಂದಿ ಭಾಗಿಯಾಗಿದ್ದು, ಅವರೆಲ್ಲರ ಗುರುತು ಪತ್ತೆ ಮಾಡಬೇಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com