ಶ್ರೀನಗರ: ದೇಶಾದ್ಯಂತ ಲಾಕ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದ್ದು ಈ ನಡುವೆ ಉಗ್ರ ಚಟುವಟಿಕೆ ನಡೆಸಲು ಮುಂದಾಗಿದ್ದ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಮೇಲೆ ಭಾರತೀಯ ಸೇನಾ ಯೋಧರು ದಾಳಿ ನಡೆಸಿದ್ದು ನಾಲ್ವರು ಉಗ್ರರು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಸಮಾಜ ವಿದ್ರೋಹಿ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಅದನ್ನು ಸೇನೆಯ ಯೋಧರು ವಿಫಲಗೊಳಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
Advertisement