ದೆಹಲಿಯಲ್ಲಿ ಕೊರೋನಾ ವಿರುದ್ಧ ಹೋರಾಟಕ್ಕೆ '5ಟಿ ಯೋಜನೆ' ಸಿದ್ಧಪಡಿಸಿದ ಕೇಜ್ರೀವಾಲ್

ಮಾರಾಣಾಂತಿಕ ಕೊರೋನಾ ವೈರಸ್ ಸೋಂಕನ್ನು ಸದೆಬಡಿಯಲು ದೆಹಲಿಯ ಆಮ್ ಆದ್ಮಿ ಸರ್ಕಾರ '5ಟಿ ಯೋಜನೆ'ಯನ್ನು ಸಿದ್ಧಪಡಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಮಾರಾಣಾಂತಿಕ ಕೊರೋನಾ ವೈರಸ್ ಸೋಂಕನ್ನು ಸದೆಬಡಿಯಲು ದೆಹಲಿಯ ಆಮ್ ಆದ್ಮಿ ಸರ್ಕಾರ '5ಟಿ ಯೋಜನೆ'ಯನ್ನು ಸಿದ್ಧಪಡಿಸಿದೆ.

ಈ ಕುರಿತು ಡಿಜಿಟಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು, ಎಲ್ ಎನ್ ಜೆಪಿ ಆಸ್ಪತ್ರೆ, ಜಿಬಿ ಪಂತ್ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳನ್ನು ಕೊವಿಡ್-19 ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.

5ಟಿ ಯೋಜನೆಯೆಂದರೆ, ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು, ತಂಡವಾಗಿ ಕೆಲಸ ಮಾಡುವುದು ಮತ್ತು ನಿರ್ವಹಣೆ(ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್, ಟೀಮ್ ವರ್ಕ್ ಮತ್ತು ಟ್ರ್ಯಾಕಿಂಗ್ ಆ್ಯಂಡ್ ಮಾನಿಟರಿಂಗ್ ) ದೆಹಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಸಿದ್ಧವಾಗಿದೆ ಎಂದರು.

ಕೊವಿಡ್-19 ರೋಗಿಗಳಿಗಾಗಿಯೇ ನಗರದ ಆಸ್ಪತ್ರೆಗಳಲ್ಲಿ 2,950 ಬೆಡ್ ಗಳನ್ನು ಮೀಸಲಿಡಲಾಗಿದೆ. ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾದರೆ 12 ಸಾವಿರ ಹೋಟೆಲ್ ರೂಮ್ ಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಕೊರೋನಾ ವೈರಸ್ ಸೋಂಕಿತರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಸುಮಾರು 1 ಲಕ್ಷ ಮಂದಿಯನ್ನು ಪರಿಕ್ಷೆಗೆ ಒಳಪಡಿಸಲಾಗುವುದು. ಅಗತ್ಯಬಿದ್ದರೆ ಕೊವಿಡ್-19 ರೋಗಿಗಳ ಚಿಕಿತ್ಸೆಗಾಗಿ ನಗರದ ಧರ್ಮಶಾಲಾಗಳನ್ನು ಮತ್ತು ಬ್ಯಾಂಕ್ವೆಟ್ ಹಾಲ್ ಗಳನ್ನು ಬಳಸಿಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com