ಕೊರೋನಾ ನಡುವೆ ಉಗ್ರ ಕೃತ್ಯಕ್ಕೆ ಸಂಚು: ಪಾಕ್, ಬಾಂಗ್ಲಾ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಬಿಎಸ್ಎಫ್ ಗೆ ಅಮಿತ್ ಷಾ ಸೂಚನೆ

ಭಾರತ-ಪಾಕಿಸ್ತಾನ ಮತ್ತು ಭಾರತ-ಬಾಂಗ್ಲಾದೇಶ ಗಡಿಗಳ ನಿರ್ವಹಣೆಯನ್ನು ಪರಿಶೀಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೇಶದೊಳಗೆ ಒಳನುಸುಳಲು ಕೊವಿಡ್-19 ಆತಂಕ ಸೂಕ್ತ ಸಮಯವಾಗಿದೆ ಎಂದು ಭಯೋತ್ಪಾದಕ ಸಂಘಟನೆಗಳು ಕಾಯುತ್ತಿರುವುದರಿಂದ ಗಡಿಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ
Updated on

ನವದೆಹಲಿ: ಭಾರತ-ಪಾಕಿಸ್ತಾನ ಮತ್ತು ಭಾರತ-ಬಾಂಗ್ಲಾದೇಶ ಗಡಿಗಳ ನಿರ್ವಹಣೆಯನ್ನು ಪರಿಶೀಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ, ದೇಶದೊಳಗೆ ಒಳನುಸುಳಲು ಕೊವಿಡ್-19 ಆತಂಕ ಸೂಕ್ತ ಸಮಯವಾಗಿದೆ ಎಂದು ಭಯೋತ್ಪಾದಕ ಸಂಘಟನೆಗಳು ಕಾಯುತ್ತಿರುವುದರಿಂದ ಗಡಿಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಸೂಚಿಸಿದ್ದಾರೆ.

ಬಿಎಸ್ಎಫ್ ಕಮಾಂಡ್ ಮತ್ತು ಸೆಕ್ಟರ್ ಹೆಡ್‍ಕ್ವಾರ್ಟರ್ಸ್ ನೊಂದಿಗೆ ಗುರುವಾರ ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಗೃಹಸಚಿವರು, ಗಡಿಯಾಚೆಗಿನ ಚಲವಲನ ತಡೆಯಲು ಗಡಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಬೇಲಿ ಇಲ್ಲದ ಪ್ರದೇಶಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ಗಡಿ ಪ್ರದೇಶಗಳಲ್ಲಿನ ರೈತರಿಗೆ ಕೊವಿದ್‍-19 ಬಗ್ಗೆ ಅರಿವು ಮೂಡಿಸಬೇಕು. ಈ ಪ್ರದೇಶಗಳಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಮಿತ್ ಶಾ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com