ತಿರುವನಂತಪುರ: ಕೊರೋನಾ ಅಟ್ಟಹಾಸದಿಂದ ನಲುಗಿರುವ ಕೇರಳ ರಾಜ್ಯ, ಸರ್ಕಾರಿ ಉದ್ಯೋಗಿಗಳ ಒಂದು ತಿಂಗಳ ವೇತನವನ್ನು 5 ಕಂತುಗಳಲ್ಲಿ ಕಡಿತಗೊಳಿಸಲು ನಿರ್ಧರಿಸಿದೆ.
ಕಡಿತಗೊಳಿಸಿದ ಒಂದು ತಿಂಗಳ ಸಂಬಳವನ್ನು ನಿರ್ದಿಷ್ಟ ಅವಧಿಯ ನಂತರ ಅವರಿಗೆ ಮರುಪಾವತಿ ಮಾಡಲಾಗುತ್ತದೆ. ಎಲ್ಲಾ ವಿಭಾಗದ ಸರ್ಕಾರಿ ನೌಕರರ ಆರು ದಿನಗಳ ವೇತನವನ್ನು ಐದು ತಿಂಗಳಲ್ಲಿ ಕಡಿತಗೊಳಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಸಲ್ಲಿಸಿದೆ.
ವಿವಿಧ ಹಂತಗಳಲ್ಲಿ ಈ ಹಣವನ್ನು ವಾಪಸ್ ನೀಡಲಾಗುವುದು, ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆ ಅನುಮೋದನೆಗೊಳ್ಳಲಿದ್ದು ಮುಖ್ಯಮಂತ್ರಿಗಳೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.
Advertisement