ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ, 2 ಯೋಧರಿಗೆ ಗಾಯ

ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ನಾರಾಯಣಪುರದ ಛೋಟೆ ಡೊಂಗರ್ ಪೊಲೀಸ್ ಠಾಣೆಯ ಕರೆಮೆಟ್ಟಾ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಎನ್'ಕೌಂಟರ್  ನಡೆದಿದೆ. ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲು ಐಇಡಿ ಸ್ಫೋಟಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಗುಂಡಿನ ಚಕಮಕಿ  ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಹತ್ಯೆಯಾಗಿರುವ ನಕ್ಸಲ್ ಮಹಿಳೆಯ ಮೃತದೇಹದ ಜೊತೆಗೆ 1 ಎಸ್ಎಲ್ಆರ್ ರೈಫಲ್, 12 ಬೋರ್ ರೈಫಲ್ಸ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಇಬ್ಬರು ಯೋಧರನ್ನು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದ್ದು, ಇದೀಗ ಆವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com