ರಕ್ಷಾಬಂಧನ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ರಾಷ್ಟ್ರಪತಿ ಕೋವಿಂದ್ ಅವರು, ರಕ್ಷಾಬಂಧನ ಹಬ್ಬದ ಶುಭಾಶಯಗಳು. ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿ,ಸಹೋದರರೊಂದಿಗೆ ವಿಶೇಷ ಬಂಧದಲ್ಲಿ ಸಂಪರ್ಕಿಸುತ್ತದೆ. ಈ ದಿನ, ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ" ಎಂದು ಹೇಳಿದ್ದಾರೆ. 

ರಕ್ಷಾಬಂಧನದ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಅನೇಕ ಶುಭಾಶಯಗಳು ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com