ರಾಮ ಮಂದಿರ ಶಿಲಾನ್ಯಾಸ: ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಕೆ

ಶ್ರೀರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಆಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಭೂಮಿ ಪೂಜೆಗೂ ಮುನ್ನ ಹನುಮಾನ್ ಗಡಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಕೆ
ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಕೆ
Updated on

ಅಯೋಧ್ಯೆ: ಶ್ರೀರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಆಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಭೂಮಿ ಪೂಜೆಗೂ ಮುನ್ನ ಹನುಮಾನ್ ಗಡಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

ಲಖನೌನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಆಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಸ್ವಾಗತಿಸಿದರು. ಬಳಿಕ ಉಭಯ ನಾಯಕರು ನೇರವಾಗಿ ಹನುಮಾಗಡಿ ದೇಗುಲಕ್ಕೆ ತೆರಳಿದರು. ಈ ವೇಳೆ ಪ್ರಧಾನಿ ಮೋದಿ ಹನುಮಾನ್ ಗಡಿಯಲ್ಲಿ ರಾಮಭಕ್ತ ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

ಇನ್ನು ಭೂಮಿ ಪೂಜೆಗೂ ಮುನ್ನ ಪ್ರಧಾನಿ ಮೋದಿ ಶಿಲಾನ್ಯಾಸದ ಸ್ಥಳದಲ್ಲಿ ಒಂದು ಪಾರಿಜಾತ ಸಸಿಯನ್ನು ನೆನಪಿನಾರ್ಥವಾಗಿ ನೆಡಲಿದ್ದಾರೆ. ಬಳಿಕ ನೇರವಾಗಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com