ನವದೆಹಲಿ: ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಕ್ಕಳಿಗೆ ಹಣ ವರ್ಗಾವಣೆ ನ್ಯಾಯಾಂಗ ನಿಂದನೆಯ ಪ್ರಯತ್ನವಾಗಿದ್ದು, ವಿಜಯ್ ಮಲ್ಯ ತಪಿತಸ್ಥನೆಂದು ಕೋರ್ಟ್ ತೀರ್ಪು ನೀಡಿತ್ತು.
ಈ ತೀರ್ಪಿನ ವಿರುದ್ಧವಾಗಿ ವಿಜಯ್ ಮಲ್ಯ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದರು. ಇದೀಗ ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.
Advertisement
Advertisement