ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

2020ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ವಿಜೇತ ಶಿಕ್ಷಕರು
ಪ್ರಶಸ್ತಿ ವಿಜೇತ ಶಿಕ್ಷಕರು
Updated on

ನವದೆಹಲಿ: 2020ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ.

ಬೆಳ್ತಂಗಡಿ ತಾಲೂಕು ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಷಲ್ ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಎನ್ನುವ ಇಬ್ಬರು ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದು ಒಟ್ಟು 47 ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ 7 ಸಾಂಸ್ಥಿಕ ಆಯ್ಕೆ ಸಮಿತಿ ಒಟ್ಟೂ 153 ಶಿಕ್ಷಕರ ಅರ್ಜಿಪರಿಶೀಲಿಸಿ ಈ ಪ್ರಶಸ್ತಿ ಪಟ್ಟಿ ತಯಾರಿಸಿದೆ,

ಇನ್ನು ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಸಂಘಟನ್ ನ ಶಿಕ್ಷಕ  ಚೆಮ್ಮಲರ್ ಷಣ್ಮುಗನ್ ಅವರಿಗೂ ಪ್ರಶಸ್ತಿ ಒಲಿದು ಬಂದಿದೆ.

ಪ್ರಶಸ್ತಿ ವಿಜೇತರ ಪೈಕಿ ಉತ್ತರ ಪ್ರದೇಶ ಹಾಗೂ ಗುಜರಾತ್ ನ ತಲಾ ಮೂವರು, , ಮಧ್ಯಪ್ರದೇಶ, ಬಿಹಾರ, ಒಡಿಸ್ಸಾ, ಪಶ್ಚಿಮ ಬಂಗಾಲ, ಜಾರ್ಖಂಡ್ ಮತ್ತು ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ತಲಾ ಇಬ್ಬರು, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಉತ್ತರಾಖಂಡ, ರಾಜಸ್ಥಾನ, ಗೋವಾ, ಮಹಾರಾಷ್ಟ್ರ, ಪುದುಶ್ಯೇರಿ,  ಛತ್ತೀಸ್ ಗಢ, ಮೇಘಾಲಯ, ತ್ರಿಪುರ, ಅಸ್ಸಾಂ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಲಢಾಕ್ ನ ತಲಾ ಒಬ್ಬ ಶಿಕ್ಷಕರುಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com