ಕೃಷ್ಣಾ ನದಿಗೆ ಹಾರಿ ವೈದ್ಯ ಆತ್ಮಹತ್ಯೆ, ಶೋಧ ಕಾರ್ಯಾಚರಣೆ ಮುಂದುವರಿಕೆ

ವೈದ್ಯರೊಬ್ಬ ಕೃಷ್ನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಪ್ರಕಾಶಂ ಬ್ಯಾರೇಜ್ ನಲ್ಲಿ ಭಾನುವಾರ ರಾತ್ರಿ ನಡೆದಿರುವುದಾಗಿ ಪೋಲೀಸರು ಹೇಳಿದ್ದಾರೆ. ವೈದ್ಯರ ಶವ ಇನ್ನೂ ಪತ್ತೆಯಾಗಿಲ್ಲ ಆದರೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಕೃಷ್ಣಾ ನದಿ
ಕೃಷ್ಣಾ ನದಿ

ವಿಜಯವಾಡ: ವೈದ್ಯರೊಬ್ಬ ಕೃಷ್ನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಪ್ರಕಾಶಂ ಬ್ಯಾರೇಜ್ ನಲ್ಲಿ ಭಾನುವಾರ ರಾತ್ರಿ ನಡೆದಿರುವುದಾಗಿ ಪೋಲೀಸರು ಹೇಳಿದ್ದಾರೆ. ವೈದ್ಯರ ಶವ ಇನ್ನೂ ಪತ್ತೆಯಾಗಿಲ್ಲ ಆದರೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಗುಂಟೂರಿನ ಜಿಜಿಹೆಚ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಅವರನ್ನು ಆದೆಪಲ್ಲಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ನದಿಗೆ ಹಾರುವ ಮುನ್ನ ವೈದ್ಯರು  ತನ್ನ ಗುರುತಿನ ಚೀಟಿ ಮತ್ತು ಫೋನ್ ಅನ್ನು ಬ್ಯಾರೇಜ್ ರಸ್ತೆಯಲ್ಲಿ ಬಿಟ್ಟಿದ್ದಾರೆ. ವೈದ್ಯ ನದಿಗೆ ಜಿಗಿಯುವುದನ್ನು  ನೋಡಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದರು. ಪೋಲೀಸರು ತಕ್ಷಣ  ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ್ ರಾವ್ ಎಎನ್‌ಐಗೆ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com