ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಗೆ ಒಕ್ಕರಿಸಿದ ಕೊರೋನಾ ಸೋಂಕು!

ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್
Updated on

ಚಂಡೀಘಡ್: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾನ್ಸೂನ್ ಅಧಿವೇಶನಕ್ಕೆ ಕೇವಲ 2 ದಿನ ಇರುವಂತೆಯೇ ಹರ್ಯಾಣ ಸಿಎಂ ಖಟ್ಟರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು PGIMER ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಖಟ್ಟರ್ ಅವರು, ನನ್ನ ಕೊರೋನಾ ವರದಿ ಪಾಸಿಟಿವ್ ಬಂದಿದ್ದು, ಕಳೆದ 6 ದಿನಗಳ  ಅಂತರದಲ್ಲಿ ನನ್ನನ್ನು ಸಂಪರ್ಕಿಸಿದ್ದವರು ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ.

6 ದಿನಗಳ ಹಿಂದಷ್ಟೇ ಖಟ್ಟರ್ ಅವರು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಸಭೆಗೆ ಹಾಜರಾಗಿದ್ದರು. ಈ ಸಭೆ ಬೆನ್ನಲ್ಲೇ ಶೇಖಾವತ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇನ್ನು ಹರ್ಯಾಣದಲ್ಲಿ ಸಿಎಂ ಖಟ್ಟರ್ ಮಾತ್ರವಲ್ಲದೇ ಸ್ಪೀಕರ್ ಗುಪ್ತಾ, ಬಿಜೆಪಿ ಶಾಸಕ ಅಸೀಮ್  ಗೋಯೆಲ್ ಮತ್ತು ರಾಮ್ ಕುಮಾರ್ ಅವರೂ ಕೂಡ ಸೋಂಕಿಗೆ ತುತ್ತಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com