ಪ್ರತೀಕಾರಕ್ಕಾಗಿ ಕೊಲೆ ಯತ್ನ: ದೆಹಲಿಯಲ್ಲಿ ಮಾಜಿ ಕಿರಿಯರ ರಾಷ್ಟ್ರೀಯ ಕುಸ್ತಿಪಟು ಅರೆಸ್ಟ್

ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೊಲ್ಲುವ ಪ್ರಯತ್ನ ನಡೆಸಿದ್ದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿಪಟುವನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಸ್ತಿಪಟು ಕುನಾಲ್ ಮತ್ತು ಅವರ ಸ್ನೇಹಿತ ನವೀನ್ ಎಂದು ಗುರುತಿಸಲಾಗಿದೆ.
ಕುನಾಲ್
ಕುನಾಲ್
Updated on

ನವದೆಹಲಿ: ಚಿಕ್ಕಪ್ಪನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೊಲ್ಲುವ ಪ್ರಯತ್ನ ನಡೆಸಿದ್ದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿಪಟುವನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಸ್ತಿಪಟು ಕುನಾಲ್ ಮತ್ತು ಅವರ ಸ್ನೇಹಿತ ನವೀನ್ ಎಂದು ಗುರುತಿಸಲಾಗಿದೆ.

19 ವರ್ಷದ ಕುನಾಲ್  2017 ರ ರಾಷ್ಟ್ರೀಯ ಜೂನಿಯರ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಪವನ್  ಹಾಗೂ ಆತನ ಸ್ನೇಹಿತ ಲಕ್ಷ್ಮಣ್  ತಮ್ಮ ಬೈಕ್‌ಗಳಲ್ಲಿ ತೆರಳುವಾಗ ಅವರನ್ನು ಕುನಾಲ್ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ್ದ. ಹೊಟ್ಟೆಗೆ ಗುಂಡು ತಾಕಿ ಅವರು ಆಸ್ಪತ್ರೆ ಸೇರಿದ್ದು ಪೋಲೀಸರು ಅವರ ಪೂರ್ವೇತಿಹಾಸ ಕೆದಕಲಾಗಿ ಪವನ್ ಮೇಲೆ ಮೂರು ಕೊಲೆ ಪ್ರಕರಣಗಳು ಹಾಗೂ ಒಂದು ಕೊಲೆ ಯತ್ನ ಪ್ರಕರಣಗಳಿದ್ದದ್ದು ಕಂಡುಬಂದಿದೆ. ಸಧ್ಯ ಕುನಾಲ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಕುನಾಲ್ ಹೇಳಿದಂತೆ 1990 ರಲ್ಲಿ ಪವನ್ ಮತ್ತು ಕುನಾಲ್ ಚಿಕ್ಕಪ್ಪ ನಡುವೆ ಜಗಳವಾಗಿತ್ತು.  1993 ರಲ್ಲಿ ಪವನ್ ನಿಂದ ಕುನಾಲ್ ಚಿಕ್ಕಪ್ಪ ಹತ್ಯೆಯಾಗಿದ್ದರು. ಹಾಗಾಗಿ ಚಿಕ್ಕಪ್ಪನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ಅವನು ನವೀನ್ ಜೊತೆ ಸಂಚು ರೂಪಿಸಿದ್ದನೆಂದು ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com