ಗುಲಾಂ ನಬಿ ಆಜಾದ್ ಉಚ್ಚಾಟನೆಗೆ ಪಕ್ಷದಲ್ಲೇ ಹೆಚ್ಚಿದ ಒತ್ತಡ

ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ.
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on

ಲಕ್ನೋ: ಎಐಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಧ್ವನಿ ಎತ್ತಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂಬ ಒತ್ತಡ ಪಕ್ಷದಲ್ಲೇ ಹೆಚ್ಚಾಗುತ್ತಿದೆ.

ಗಾಂಧಿಯೇತರ ಕುಟುಂಬದವರಿಗೆ ಅಧ್ಯಕ್ಷ ಪಟ್ಟ ನೀಡುವಂತೆ ಪತ್ರ ಬರೆದಿದ್ದ  ಆಜಾದ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡ ನಸೀಬ್ ಪಠಾಣ್ ಒತ್ತಾಯಿಸಿದ್ದಾರೆ.

ಪಕ್ಷದ ತತ್ವ ಸಿದ್ಧಾಂತಗಳನ್ನು ಬದಿಗೊತ್ತಿ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಕಹಳೆ ಮೊಳಗಿಸಲು ಮುನ್ನುಡಿ ಬರೆದಿರುವ ಆಜಾದ್ ಅವರನ್ನು ಪಕ್ಷದಿಂದ ಹೊರಹಾಕುವುದೇ  ಸರಿ ಎಂದು ಅವರು ಹೇಳಿದ್ದಾರೆ. 

2017ರ ಉತ್ತರಪ್ರದೇಶ ಚುನಾವಣೆಯ ಉಸ್ತುವಾರಿಯನ್ನು ಗುಲಾಂ ನಬಿ ಆಜಾದ್ ಅವರು ವಹಿಸಿಕೊಂಡಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾದ ನಂತರ ಅವರು ತಮ್ಮ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com