ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಸಾಕ್ಷಿ ಮಹಾರಾಜ್: ಬಲವಂತದ ಕ್ವಾರಂಟೈನ್

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನಗಳ ಕ್ವಾರಂಟೈನ್‌ಗೊಳಪಡಿಸಿದೆ.
ಸಾಕ್ಷಿ ಮಹಾರಾಜ್
ಸಾಕ್ಷಿ ಮಹಾರಾಜ್
Updated on

ಜಾರ್ಖಂಡ್: ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನಗಳ ಕ್ವಾರಂಟೈನ್‌ಗೊಳಪಡಿಸಿದೆ.

ಉತ್ತರ ಪ್ರದೇಶದಿಂದ ನೇರ ಜಾರ್ಖಂಡ್‌ನ ಗಿರಿಡಿಹ್ ತೆರಳಿದ ಸಾಕ್ಷಿ ಮಹಾರಾಜ್ ಅಲ್ಲಿಂದ ಧನಬಾದ್‌ ಮೂಲಕ ಉನ್ನಾವ್‌ ತೆರಳಿ, ಅಲ್ಲಿಂದ ರೈಲಿನಲ್ಲಿ ದೆಹಲಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಪಿರ್ಟಾಂಡ್ ಪೊಲೀಸ್ ಸ್ಟೇಷನ್ ಬಳಿ ತಡೆಯಲಾಯಿತು.

"ಸಂಸದರು ಜಿಲ್ಲೆಗೆ ಬರುವ ವಿಷಯ ತಿಳಿಸಿರಲಿಲ್ಲ. ಕೋವಿಡ್ ಸಾಂಕ್ರಾಮಿಕ ಕಾರಣಕ್ಕಾಗಿ ರಾಜ್ಯ ಗಡಿಯನ್ನು ಬಂದ್ ಮಾಡಲಾಗಿದ್ದರು ನಿಬಂಧನೆಗಳನ್ನು ಉಲ್ಲಂಘಿಸಿ ರಾಜ್ಯ ಪ್ರವೇಶಿಸಿದ್ದಕ್ಕಾಗಿ ಅವರನ್ನು ನಗರದ ಶಾಂತಿ ಭವನದಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿದ್ದೇವೆ" ಎಂದು ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ತಮ್ಮನ್ನು ಕ್ವಾರಂಟೈನ್‌ಗೆ ಒಳಪಡಿಸುವುದಕ್ಕೆ ಖಂಡತುಂಡವಾಗಿ ವಿರೋಧ ವ್ಯಕ್ತಪಡಿಸಿದ ಸಾಕ್ಷಿ ಮಹಾರಾಜ್ "ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ" ಎಂದು ಕಿಡಿಕಾರಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್‌ ಕೂಡ ಬುಧವಾರ ರಾಂಚಿಯ ರಿಮ್ಸ್‌ನಲ್ಲಿರುವ ತನ್ನ ತಂದೆಯನ್ನು ನೋಡಿ ಹೋಗಿದ್ದಾರೆ. ಅವರಿಗಿಲ್ಲದ ಕ್ವಾರಂಟೈನ್ ನನಗೆ ಏಕೆ? ಇಲ್ಲಿ ರಾಜಕೀಯ ನಡೆಯುತ್ತಿದೆ. ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com