ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್, ಪತ್ರಕರ್ತನ ವಿರುದ್ಧದ ಕೇಸ್ ಮುಚ್ಚಿಹಾಕಿದ ಪೊಲೀಸರು

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಪತ್ರಕರ್ತನ ವಿರುದ್ಧದ ಕೇಸ್ ನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲ ಎಂದು ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್
Updated on

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಸಚಿನ್ ಪೈಲಟ್ ಮಾಧ್ಯಮ ಮ್ಯಾನೇಜರ್ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಪತ್ರಕರ್ತನ ವಿರುದ್ಧದ ಕೇಸ್ ನ್ನು ಪೊಲೀಸರು ಮುಚ್ಚಿ ಹಾಕಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಧಾರ ಇಲ್ಲ ಎಂದು ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಅಧಿಕಾರಕ್ಕಾಗಿ ಭಿನ್ನಾಭಿಪ್ರಾಯ ಭುಗಿಲೆದಿದ್ದಾಗ ಆಗಸ್ಟ್ ತಿಂಗಳಲ್ಲಿ ಸುಳ್ಳು ಸುದ್ದಿ ಆರೋಪದಲ್ಲಿ  ಮಾಜಿ ಮುಖ್ಯಮಂತ್ರಿಗಳ  ಮಾಧ್ಯಮ ಮ್ಯಾನೇಜರ್ ಲೊಕೇಂದ್ರ ಸಿಂಗ್ ಸೇರಿದಂತೆ ಇಬ್ಬರು ಪತ್ರಕರ್ತರ ವಿರುದ್ಧ ಜೈಪುರ ಪೊಲೀಸರು ಪ್ರಕರಣ ದಾಖಲಿಸಿದ್ದರು. 

ತಪಿತಸ್ಥ ಎಂಬುದಕ್ಕೆ ಯಾವುದೇ ಸಾಕ್ಷ್ಯಧಾರಗಳು ಕಂಡುಬಾರದ ಹಿನ್ನೆಲೆಯಲ್ಲಿ ಪೊಲೀಸರು ಅಂತಿಮ ವರದಿಯನ್ನು ದಾಖಲಿಸಿದ್ದಾರೆ ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್ ಶ್ರಿವಾಸ್ತವ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com