ನಡ್ಡಾ ಬೆಂಗಾವಲು ಪಡೆ ಮೇಲೆ ದಾಳಿ: ಪಶ್ಚಿಮ ಬಂಗಾಳ ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!

ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ. 
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು
Updated on

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯಪಾಲರಿಂದ ವರದಿ ಪಡೆದಿರುವ ಕೇಂದ್ರ ಗೃಹ ಸಚಿವಾಲಯ, ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಿದೆ. 

ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ಬಗ್ಗೆ ರಾಜ್ಯಪಾಲ ಜಗದೀಪ್ ದಾನ್ಕಾರ್  ಕಳವಳ ವ್ಯಕ್ತಪಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಜೆ. ಪಿ. ನಡ್ಡಾ ಅವರ ಸಭೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ ಇಂತಹ ಚಟುವಟಿಕೆಗಳನ್ನು ತಡೆಯುವಲ್ಲಿ ಆಡಳಿತ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಾಜ್ಯಪಾಲರು, ಜೆಪಿ ನಡ್ಡಾ  ರ‍್ಯಾಲಿ  ವೇಳೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿಗೆ ಎಚ್ಚರಿಕೆ ನೀಡಲಾಗಿತ್ತು ಆದಾಗ್ಯೂ, ಅವರು ಸ್ಪಂದಿಸಿದ ರೀತಿ ರಾಜ್ಯದಲ್ಲಿ ಸಂವಿಧಾನಿಕ ಹುದ್ದೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಜೆ. ಪಿ. ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹರ್ಬೊರು ಪ್ರದೇಶದ ಸಿರಾಕೊಲ್ ಬಳಿ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಕೈಲಾಸ್ ವಿಜಯ್ ವರ್ಗೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಗೊಂಡಿರುವುದಾಗಿ ಬಿಜೆಪಿ ಪಕ್ಷ ಹೇಳಿದೆ.
ಆದಾಗ್ಯೂ, ಪರಿಸ್ಥಿತಿ ಶಾಂತವಾಗಿತ್ತೆಂದು ಪಶ್ಚಿಮ ಬಂಗಾಳ ಪೊಲೀಸರು ಸಮರ್ಥಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com