2001 ಸಂಸತ್ ದಾಳಿ: ಹೇಡಿತನದ ಕೃತ್ಯವನ್ನು ನಾವೆಂದಿಗೂ ಮರೆಯುವುದಿಲ್ಲ- ಪ್ರಧಾನಿ ಮೋದಿ

2001 ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: 2001 ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವೆಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಭಯೋತ್ಪಾಕರ ಕೌರ್ಯಕ್ಕೆ ಬಲಿಯಾಗಿ, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 19 ವರ್ಷಗಳು ಕಳೆದಿವೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, 2001 ರಲ್ಲಿ ಈ ದಿನ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ನೆನೆಯುತ್ತಿದ್ದೇವೆ. ವೀರ ಯೋಧರಿಗೆ ನಾವೆಂದಿಗೂ ಕೃತಜ್ಞರಾಗಿರಬೇಕೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com