ಜಮ್ಮು ಮತ್ತು ಕಾಶ್ಮೀರ: ಉಗ್ರರಿಂದ ಗುಂಡಿನ ದಾಳಿ, ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ.
ಪೊಲೀಸ್ ಭದ್ರತೆ
ಪೊಲೀಸ್ ಭದ್ರತೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಇಂದು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ.

ಮೂಲಗಳ ಪ್ರಕಾರ ರಾಜಧಾನಿ ಶ್ರೀನಗರದ ನಾಟಿಪೋರಾದ ಪಿಡಿಪಿ ಮುಖಂಡ ಫರ್ವೇಜ್ ಭಟ್ ಅವರ ನಿವಾಸದ ಎದುರು ಭದ್ರತೆಗಾಗಿ ನಿಯೋಜನೆಯಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಮನ್ಸೂರ್ ಅಹ್ಮದ್ ಎಂಬಾತನಿಗೆ ಗುಂಡೇಟು ತಗುಲಿದ್ದು, ಗಾಯಾಳು ಮನ್ಸೂರ್ ಅಹ್ಮದ್ ಭಟ್ ಅವರ ವೈಯುಕ್ತಿಕ ಭದ್ರತಾ ಸಿಬ್ಬಂದಿಯಾಗಿದ್ದರು ಎನ್ನಲಾಗಿದೆ. 

ಗಾಯಾಳು ಪೇದೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗುಂಡೇಟಿನಿಂದಾಗಿ ಅವರ ಮೂಳೆ ಮತ್ತು ಜಾಯಿಂಟ್ ಗೆ ಗಂಭೀರ ಗಾಯವಾಗಿದೆ. ಇನ್ನು ದಾಳಿ ಸಂದರ್ಭದಲ್ಲಿ ಪಿಡಿಪಿ ನಾಯಕ ಭಟ್ ಮತ್ತು ಅವರ ಮನೆಯಲ್ಲಿಯೇ ಇತ್ತೇ ಅಥವಾ ಇರಲಿಲ್ಲವೇ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com