ಪ್ರತಿಭಟನಾನಿರತ ರೈತರ ಸ್ಥಿತಿಗೆ ಮರುಗಿದ ಬಾಲಿವುಡ್ ನಟ: ಇದಕ್ಕಾಗಿ 1 ಕೋಟಿ ರೂ. ನೆರವು ಘೋಷಣೆ!

ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ  ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್
ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್
Updated on

ನವದೆಹಲಿ: ಕೊರೆಯುವ ಚಳಿಯ ನಡುವೆಯೂ ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ  ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿನ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಾಲಿವುಡ್ ಹಾಗೂ ಪಂಜಾಬ್ ನಟ, ಸಂಗೀತಗಾರ ದಿಲ್ಜಿತ್ ದೋಸಾಂಜ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಿಲ್ಜಿತ್ ದೋಸಾಂಜ್, ಪ್ರತಿಭಟನಾಕಾರರಿಗಾಗಿ ಬೆಚ್ಚನೆಯ ಉಡುಪು ಖರೀದಿಗೆ 1 ಕೋಟಿ ರೂ. ನೆರವು ನೀಡುವುದಾಗಿ ಹೇಳಿದರು.

ಈ ವಾರದ ಆರಂಭದಲ್ಲಿ ರೈತರ ಪ್ರತಿಭಟನೆ ಕುರಿತು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದರು.

ಸಿಂಗು ಗಡಿಯಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ದೋಸಾಂಜ್, ಹೊಸ ಇತಿಹಾಸ ಸೃಷ್ಟಿಸಿರುವ ಎಲ್ಲಾ ರೈತರಿಗೂ ಹ್ಯಾಟ್ಸ್ ಆಫ್, ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಸಮಸ್ಯೆಗಳನ್ನು ಯಾರೂ ಕೂಡಾ ಬೇರೆ ಕಡೆಗೆ ತಿರುಗಿಸಬಾರದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com