ವಿವಾಹವಾಗಲು ವ್ಯಕ್ತಿ ನಿರಾಕರಣೆ: ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು

ತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೌಶುಂಭಿ: ತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಕೌಶುಂಭಿಯ ಸಿರಾತುವಿನಲ್ಲಿ ಈ ಘಟನೆ ನಡೆದಿದೆ, ಮೃತ ಯುವತಿ ಮತ್ತು ವ್ಯಕ್ತಿ ಬೇರೆ ಬೇರೆ ಜಾತಿಯವರಾಗಿದ್ದರು, ಹೀಗಾಗಿ ಆತ ವಿವಾಹವಾಗಲು ನಿರಾಕರಿಸಿದ್ದ, ಇದರಿಂದ ಮನನೊಂದ ಆಕೆ ಮಂಗಳವಾರ ಬೆಂಕಿ ಹಚ್ಚಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಶುಕ್ರವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಚಾರಿ ಸೋಂಕರ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com