ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ: ದೆಹಲಿಯಲ್ಲಿ ಡಿಸೆಂಬರ್ 30 ರಂದು ರೈತರ ಸಭೆ ಕರೆದ ಕೇಂದ್ರ

ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಡಿಸೆಂಬರ್ 30 ರಂದು ಸಭೆ ಕರೆದಿದೆ.
ರೈತ ಮುಖಂಡರು
ರೈತ ಮುಖಂಡರು
Updated on

ನವದೆಹಲಿ: ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಡಿಸೆಂಬರ್ 30 ರಂದು ಸಭೆ ಕರೆದಿದೆ.

ಡಿಸೆಂಬರ್ 30 ರಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನಭವನದಲ್ಲಿ ಈ ಸಭೆ ನಡೆಯಲಿದೆ.

ಕೇಂದ್ರ ಸರ್ಕಾರ ಕಳೆದ ಗುರುವಾರ, ತಾನು ಎಲ್ಲಾ ಸಮಸ್ಯೆಗಳ ಕುರಿತು ಮುಕ್ತ ಮಾತುಕತೆಗೆ ಸಿದ್ಧವಿದ್ದು, ಅದಕ್ಕೆ ನೀವೇ ದಿನಾಂಕ ಮತ್ತು ಸಮಯ ನಿಗದಿಪಡಿಸುವಂತೆ ರೈತ ಮುಖಂಡರಿಗೆ ಪತ್ರ ಬರೆದಿತ್ತು. ಅದರಂತೆ ರೈತ ಮುಖಂಡರು ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಡಿಸೆಂಬರ್ 29 ರಂದು ದಿನಾಂಕ ನಿಗದಿ ಮಾಡಿದ್ದರು. ಈಗ ಕೇಂದ್ರ ಸರ್ಕಾರ ಡಿಸೆಂಬರ್ 30ಕ್ಕೆ ರೈತ ಮುಖಂಡರ ಸಭೆ ಕರೆದಿದೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ಇತರೆ ರಾಜ್ಯಗಳ ಸಾವಿರಾರು ರೈತರು ಕಳೆದ ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com