ಕೊರೋನಾ ಪಾಸಿಟಿವ್: ಉತ್ತರಾಖಂಡ ಸಿಎಂ ತ್ರಿವೇಂದ್ರ ರಾವತ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು!

ಕೊರೋನಾ ಸೋಂಕಿನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ಉತ್ತರಾಖಂಡ ಸಿಎಂ ತ್ರಿವೇಂದ್ರ ರಾವತ್
ಉತ್ತರಾಖಂಡ ಸಿಎಂ ತ್ರಿವೇಂದ್ರ ರಾವತ್
Updated on

ಡೆಹ್ರಾಡೂನ್: ಕೊರೋನಾ ಸೋಂಕಿನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕೆಲ ದಿನಗಳ ಹಿಂದಷ್ಟೇ ತ್ರಿವೇಂದ್ರ ರಾವತ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ತಿಳಿದುಬಂದಿತ್ತು. ನಂದರ ಅವರನ್ನು ಡೂನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಮನೆಯಲ್ಲಿಯೇ ಹೋಂ ಐಸೋಲೇಷನ್ ಗೊಳಗಾಗಿದ್ದರು. 

ಭಾನುವಾರ ರಾವತ್ ಅವರ ಆರೋಗ್ಯ ಪರಿಶೀಲಿಸಿದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಇದರಂತೆ ರಾವತ್ ಅವರು ಡೂನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. 

ಇದೀಗ ವೈದ್ಯರು ರಾವತ್ ಅವರ ಎದೆಭಾಗದಲ್ಲಿ ಸೋಂಕು ಪತ್ತೆಯಾಗಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಡೂನ್ ಆಸ್ಪತ್ರೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com