ನವದೆಹಲಿ: ಶಾಹೀನ್ ಬಾಗ್ ಶೂಟರ್ ನನ್ನು ಪಕ್ಷಕ್ಕೆ ಸೇರಿಕೊಂಡ ಕೆಲವೇ ಗಂಟೆಗಳಲ್ಲಿ ಆತನನ್ನು ಉಚ್ಛಾಟಿಸಿದೆ.
ಸಿಎಎ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಪಿಲ್ ಗುರ್ಜರ್ ಗುಂಡು ಹಾರಿಸಿದ್ದು ಈ ಸಂಬಂಧ ಆತನನ್ನು ಬಂಧಿಸಲಾಗಿತ್ತು. ಇನ್ನು ಜಾಮೀನಿನ ಮೇಲೆ ಹೊರಬಂದಿದ್ದ ಕಪಿಲ್ ಗಾಜಿಯಾಬಾದ್ ಜಿಲ್ಲಾ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದನು.
ಗುಂಡು ಹಾರಿಸಿ ಬಂಧನಕ್ಕೀಡಾಗಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಾ ಎಂದು ಹಿರಿಯ ನಾಯಕರು ಜಿಲ್ಲಾ ನಾಯಕರಿಗೆ ತರಾಟೆಗೆ ತೆಗೆದುಕೊಂಡ ನಂತರ ಕಪಿಲ್ ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
Advertisement