ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ದೋಚಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಸೆ.9 ರಂದು ಈ ಪ್ರಕರಣ ಬೆಳಕಿಗೆ ಬಂದಿತ್ತು. ಅಯೋಧ್ಯೆಯ ಎಸ್ ಎಸ್ ಪಿ ದೀಪಕ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಮಜನ್ಮಭೂಮಿ ಟ್ರಸ್ಟ್ ನಿಂದ 6 ಲಕ್ಷ ರೂಪಾಯಿ ಕಳುವಾಗಿರುವ ಬಗ್ಗೆ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಡಿದ್ದ ದೂರಿನ ಆಧಾರದಲ್ಲಿ ಸೆ.9 ರಂದು ಪ್ರಕರಣ ದಾಖಲಿಸಲಾಗಿತ್ತು.
"ಎಎಸ್ ಪಿ ನೇತೃತ್ವದ ತಂಡ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದವರ ಪೈಕಿ ನಾಲ್ವರನ್ನು ಬಂಧಿಸಿದ್ದು, ಉಳಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಲಾಗುವುದು" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement