ನಿರ್ಭಯಾ ಅಪರಾಧಿಗಳು ಕಾನೂನಿನೊಂದಿಗೆ ಆಟವಾಡುತ್ತಿದ್ದಾರೆ: ಕೇಂದ್ರ ಆರೋಪ

ನಿರ್ಭಯಾ ಅಪರಾಧಿಗಳು ನ್ಯಾಯಾಂಗ ಪ್ರಕ್ರಿಯೆಯನ್ನು ಒಂದು 'ಮಜದ ಪಯಣ'ದಂತೆ ಪರಿಗಣಿಸಿದ್ದು, ಗಲ್ಲು ಶಿಕ್ಷೆಯ ಜಾರಿಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನಲ್ಲಿ ಆರೋಪಿಸಿತು.
ನಿರ್ಭಯಾ ಅಪರಾಧಿಗಳು
ನಿರ್ಭಯಾ ಅಪರಾಧಿಗಳು
Updated on

ನವದೆಹಲಿ: ನಿರ್ಭಯಾ ಅಪರಾಧಿಗಳು ನ್ಯಾಯಾಂಗ ಪ್ರಕ್ರಿಯೆಯನ್ನು ಒಂದು 'ಮಜದ ಪಯಣ'ದಂತೆ ಪರಿಗಣಿಸಿದ್ದು, ಗಲ್ಲು ಶಿಕ್ಷೆಯ ಜಾರಿಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನಲ್ಲಿ ಆರೋಪಿಸಿತು. 

ಗಲ್ಲುಶಿಕ್ಷೆ ಜಾರಿಗೆ  ದೆಹಲಿ ಪಟಿಯಾಲ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ವಿಚಾರಣೆ ವೇಳೆ ಸರ್ಕಾರಿ ವಕೀಲರು, ಅಪರಾಧಿಗಳನ್ನು ಪ್ರತ್ಯೇಕವಾಗಿ ನೇಣಿಗೇರಿಸಬಹುದು. ಕ್ಷಮಾದಾನ ಅರ್ಜಿ ವಿಚಾರಣೆಗೆ ಬಾಕಿಯಿದ್ದಲ್ಲಿ ಮಾತ್ರ ಅವರನ್ನು ಗಲ್ಲಿಗೇರಿಸುವ ಆದೇಶಕ್ಕೆ ತಡೆ ಹಿಡಿಯಬಹುದು. ಆದರೆ, ಈ ಪ್ರಕರಣದಲ್ಲಿ ಘಟನೆ ನಡೆದು ಏಳು ವರ್ಷಗಳು ಕಳೆದಿದ್ದರೂ ಇನ್ನೂ ಅಪರಾಧಿಗಳು ಕಾನೂನಿನೊಂದಿಗೆ ಆಟವಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com