ನಾನು ಭಯೋತ್ಪಾದಕನಂತೆ ಕಂಡರೆ ದೆಹಲಿ ಜನತೆ ಬಿಜೆಪಿಗೆ ಮತ ನೀಡಲಿ: ಕೇಜ್ರಿವಾಲ್

ತಮ್ಮನ್ನು ಭಯೋತ್ಪಾದಕ ಎಂದು ಕರೆದಿರುವುದು ತೀವ್ರ ಮಾನಸಿಕ ಕ್ಷೋಭೆಗೆ ಗುರಿಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ನೋವು ತೋಡಿಕೊಂಡಿದ್ದಾರೆ.
ನಾನು ಭಯೋತ್ಪಾದಕನಂತೆ ಕಂಡರೆ ದೆಹಲಿ ಜನತೆ ಬಿಜೆಪಿಗೆ ಮತ ನೀಡಲಿ: ಕೇಜ್ರಿವಾಲ್
ನಾನು ಭಯೋತ್ಪಾದಕನಂತೆ ಕಂಡರೆ ದೆಹಲಿ ಜನತೆ ಬಿಜೆಪಿಗೆ ಮತ ನೀಡಲಿ: ಕೇಜ್ರಿವಾಲ್
Updated on

ನವದೆಹಲಿ: ಬಿಜೆಪಿ ಸಂಸದ ಪರ್ವೇಶ್ ವರ್ಮಾ, ತಮ್ಮನ್ನು ಭಯೋತ್ಪಾದಕ ಎಂದು ಕರೆದಿರುವುದು ತೀವ್ರ ಮಾನಸಿಕ ಕ್ಷೋಭೆಗೆ ಗುರಿಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ನೋವು ತೋಡಿಕೊಂಡಿದ್ದಾರೆ. ತಮ್ಮ ಜೀವನವನ್ನು ದೇಶದ ಸೇವೆಗಾಗಿ ಸಮರ್ಪಿಸಿಕೊಂಡಿದ್ದೇನೆ. 

ಈ ಉದ್ದೇಶಕ್ಕಾಗಿ ಸರ್ಕಾರಿ ಉದ್ಯೋಗವನ್ನು ಸಹ ತ್ಯಜಿಸಿದ್ದಾಗಿ ಅವರು ಹೇಳಿದ್ದಾರೆ.  ಒಂದೊಮ್ಮೆ ತಾವು  ದೆಹಲಿಯ ಜನರಿಗೆ ಭಯೋತ್ಪಾದಕನಂತೆ ಕಂಡು ಬಂದರೆ ಮತವನ್ನು ಬಿಜೆಪಿಗೆ ಚಲಾಯಿಸಲಿ,   ಇಲ್ಲವಾದರೆ ನಮ್ಮ ಪಕ್ಷದ  “ಪೊರಕೆ” ಗುರುತಿಗೆ ಮತ ನೀಡಲಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com