ಶಾಹೀನ್'ಭಾಗ್ ನಲ್ಲಿ ಸಿಎಎ ವಿರುದ್ದ ಪ್ರತಿಭಟನೆ: ಪ್ರತಿಭಟನೆ ತೆರವು ಅರ್ಜಿ ಕುರಿತು ಸುಪ್ರೀಂನಲ್ಲಿ ವಿಚಾರಣೆ

ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ. 

ಕೆಲ ದಿನಗಳ ಹಿಂದಷ್ಟೇ ಈ ಕುರಿತ ಅರ್ಜಿಯ ವಿಚಾರಣೆ ಸರ್ವೋಚ್ಛ ನ್ಯಾಯಾಲಯದ ಅಂಗಳಕ್ಕೆ ಬಂದಿತ್ತು. ಆದರೆ, ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಈ ವಿಚಾರವನ್ನು ನ್ಯಾಯಾಲಯ ಕೈಗೆತ್ತಿಕೊಳ್ಳುವ ಯಾವುದೇ ನಿರ್ಣಯ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು. 

ಈ ವೇಳೆ ಶಾಹೀನ್ ಭಾಗ್ ಪ್ರತಿಭಟನೆ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಕೆ.ಎಂ.ಜೋಸೆಫ್ ಒಳಗೊಂಡ ದ್ವಿಸದಸ್ಯ ಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಈ ಕುರಿತು ಶಾಹೀನ್ ಭಾಗ್ ಪ್ರತಿಭಟನೆಯಲ್ಲಿ ಸಮಸ್ಯೆಯಿದೆ ಎಂಬುದು ನ್ಯಾಯಾಲಯಕ್ಕೆ ಮನವರಿಕೆಯಾಗಿದೆ. ಇದನ್ನು ಹೇಗೆ ಪರಿಹರಿಸಬೇಕೆಂಬುದನ್ನು ನಾವು ನೋಡಬೇಕಿದೆ. ಆದರೆ, ಈ ಪ್ರಕರಣವನ್ನು ಸೋಮವಾರ ವಿಚಾರಣೆ ನಡೆಸುವುದೇ ಸೂಕ್ತ. ಈ ವೇಳೆಗಾಗಲೇ ನಾವು ಮತ್ತಷ್ಟು ಉತ್ತಮ ಸ್ಥಾನದಲ್ಲಿರುತ್ತೇವೆಂದು ಅಭಿಪ್ರಾಯಪಟ್ಟಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com