ಪೂಂಚ್: ಪ್ರತೀಕಾರದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಮೆಂಧರ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 9ರಂದು ಭಾನುವಾರ ಮೂವರು ಪಾಕಿಸ್ತಾನಿ ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆಗೆ ಸಹ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದೆ.
ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ, ಮೊನ್ನೆ ಭಾನುವಾರ ಗಡಿ ನಿಯಂತ್ರಣ ರೇಖೆಯ ಮೆಂಧರ್ ವಲಯದಲ್ಲಿ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಮೂವರು ಪಾಕಿಸ್ತಾನಿ ಉಗ್ರರನ್ನು ಕೊಂದು ಹಾಕಿದೆ. ಮೆಂಧರ್ ಸೇರಿದಂತೆ ಇತರ ವಲಯಗಳಲ್ಲಿ ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮೊನ್ನೆ ಭಾನುವಾರ ಪಾಕಿಸ್ತಾನ ಪೂಂಚ್ ಜಿಲ್ಲೆಯ ಬಾಲಕೋಟ್ ಮತ್ತು ಮೆಂಧರ್ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು.
Advertisement