ನಮ್ಮ ಸೋಲಿನ ಬಗ್ಗೆ ವಿಮರ್ಶಿಸದೆ ಆಪ್ ಗೆಲುವನ್ನೇಕೆ ಸಂಭ್ರಮಿಸುತ್ತೀರಿ?: ಚಿದಂಬರಂ ವಿರುದ್ಧ ಶರ್ಮಿಷ್ಠ ಮುಖರ್ಜಿ ಕಿಡಿ 

ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದು ಆಮ್ ಆದ್ಮಿ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಈ ಬಾರಿ ಕೂಡ ಕಾಂಗ್ರೆಸ್ ನದ್ದು ಶೂನ್ಯ ಸಂಪಾದನೆ. 
ಶರ್ಮಿಷ್ಠ ಮುಖರ್ಜಿ
ಶರ್ಮಿಷ್ಠ ಮುಖರ್ಜಿ
Updated on

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದು ಆಮ್ ಆದ್ಮಿ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಈ ಬಾರಿ ಕೂಡ ಕಾಂಗ್ರೆಸ್ ನದ್ದು ಶೂನ್ಯ ಸಂಪಾದನೆ. 


ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಮ್ ಆದ್ಮಿ ಪಾರ್ಟಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವುದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರಿ ಕಾಂಗ್ರೆಸ್ ನಾಯಕಿ ಶರ್ಮಿಷ್ಠ ಮುಖರ್ಜಿಗೆ ಸಿಟ್ಟು ತರಿಸಿದೆ.


ನಿನ್ನೆಯಷ್ಟೇ ಅವರು ಕಾಂಗ್ರೆಸ್ ನ ತೀರಾ ಕಳಪೆ ಸಾಧನೆ ಬಗ್ಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇನ್ನಾದರೂ ಪಕ್ಷ ಎಚ್ಚೆತ್ತುಕೊಳ್ಳಬೇಕು ಎಂದಿದ್ದರು. ಇದೀಗ ಚಿದಂಬರಂ ಅವರ ಟ್ವೀಟ್ ಗೆ ಪ್ರತಿ ಟ್ವೀಟ್ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.


ನಿನ್ನೆ ಆಪ್ ಗೆಲ್ಲುತ್ತಿದ್ದಂತೆ ಟ್ವೀಟ್ ಮಾಡಿದ್ದ ಚಿದಂಬರಂ, ಬಿಜೆಪಿಯ ಧ್ರುವೀಕರಣ, ವಿಭಜನೆಯ ಮತ್ತು ಅಪಾಯಕಾರಿ ಅಜೆಂಡಾಗಳನ್ನು ಸೋಲಿಸಲು ದೆಹಲಿ ಜನತೆ ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿದ್ದಾರೆ. ಆಪ್ ಗೆದ್ದಿದೆ, ನಿಷ್ಕರುಣಿಗಳು, ಬಡಾಯಿ ಕೊಚ್ಚಿಕೊಳ್ಳುವವರು ಸೋತಿದ್ದಾರೆ ಎಂದು ಹೇಳಿದ್ದರು.


ಇದಕ್ಕೆ ಅವರದೇ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿ, ನಿಮ್ಮ ಮೇಲೆ ಗೌರವ ಇಟ್ಟುಕೊಂಡು ಕೇಳುತ್ತಿದ್ದೇನೆ ಸರ್, ರಾಜ್ಯದ ಪ್ರಾದೇಶಿಕ ಪಕ್ಷದ ಮುಂದೆ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಹೊರಗುತ್ತಿಗೆ ಕೆಲಸ ನೀಡಿತ್ತೇ? ಇಲ್ಲದಿದ್ದರೆ ನೀವು ನಮ್ಮ ಪಕ್ಷದ ಸೋಲನ್ನು ಪರಾಮರ್ಶಿಸದೆ ಆಪ್ ನ ಗೆಲುವನ್ನೇಕೆ ಸಂಭ್ರಮಿಸುತ್ತೀರಿ ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com