'ನಿರ್ಭಯಾ ಪ್ರಕರಣ'ದ ತೀರ್ಪು ಓದುತ್ತಲೇ ಕುಸಿದು ಬಿದ್ದ ನ್ಯಾಯಮೂರ್ತಿ ಭಾನುಮತಿ

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್ ಭಾನುಮತಿ ಅವರು, ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಇಂದು ನಡೆದಿದೆ.
ನ್ಯಾಯಮೂರ್ತಿ ಭಾನುಮತಿ
ನ್ಯಾಯಮೂರ್ತಿ ಭಾನುಮತಿ
Updated on

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್ ಭಾನುಮತಿ ಅವರು, ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಇಂದು ನಡೆದಿದೆ.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಇಂದು ಈ ಕುರಿತು ತನ್ನ ತೀರ್ಪು ನೀಡಿತು. ತೀರ್ಪು ಓದುತ್ತಿದ್ದಾಗ ನ್ಯಾಯಮೂರ್ತಿ ಆರ್ ಭಾನುಮತಿ ಅವರು ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದರು. ತೀರ್ಪು ಓದುತ್ತಿದ್ದಾಗ ದಿಢೀರ್ ಪ್ರಜ್ಞಾಹೀನರಾದ ಭಾನುಮತಿ ಅವರು ಕುರ್ಚಿಯಿಂದ ಕುಸಿದರು. ಕೆಲ ಕ್ಷಣಗಳ ಕಾಲ ಮತ್ತೆ ಪ್ರಜ್ಞೆ ಪಡೆದ ಅವರನ್ನು ಕೂಡಲೇ ವ್ಙೀಲ್ ಚೇರ್ ಮೂಲಕ ಪ್ರತ್ಯೇಕ ಕೊಠಡಿಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು.

ಬಳಿಕ ಮಾತನಾಡಿದ ಮತ್ತೋರ್ವ ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರ ಈ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿಗಳ ಚೇಂಬರ್ ನಲ್ಲೇ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com