ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಕಂಬಳದ ಮೋಡಿಗಾರ ಶ್ರೀನಿವಾಸ್ ಗೌಡರ ಬೆನ್ನು ತಟ್ಟಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
Updated on

ನವದೆಹಲಿ: ಕಂಬಳ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿ ದೇಶದ ಗಮನ ಸೆಳೆದಿರುವ ಕರ್ನಾಟಕದ ಶ್ರೀನಿವಾಸ್ ಗೌಡ ಅವರ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com